ಟಗರು ತುಂಬಿಕೊಂಡು ಬರುತ್ತಿದ್ದ ಕಾರು ಚಾಲಕನ‌ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಕುಮಟಾ: ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ಶಿಗ್ಗಾಂವನಿಂದ ಕುಮಟಾ ಮಿರ್ಜಾನಿಗೆ ಟಗರನ್ನು ತುಂಬಿಕೊಂಡು ಬರುತ್ತಿದ್ದ ಓಮಿನಿ ಕತಗಾಲ ಮಾಸ್ತಿಮನೆ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಚಾಲಕ ಮುತ್ತಾಲಿಫ್ ಬಸೀಸ್ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಮೃತಪಟ್ಟಿದ್ದಾನೆ. ಇನ್ನೊಬ್ಬ ಅಮಾನುಲ್ಲಾ ಸಮೀವುಲ್ಲಾ ಗಾಯಗೊಂಡಿದ್ದು ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ,‌ಹೊನ್ನಾವರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕುಮಟಾ

Exit mobile version