ತಾಯಿ ಮೊಬೈಲ್ ಕೊಡಿಸಿಲ್ಲವೆಂದು ಮನನೊಂದು ಮಗ ಸಾವಿಗೆ ಶರಣು

ಹಳಿಯಾಳ: ಮೊಬೈಲ್ ಕೊಡಿಸಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮನೆಯಲ್ಲಿಯೇ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಪಟ್ಟಣದ ಖಾಜಿಗಲ್ಲಿಯಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ರಹವಾಸಿ ಅಜಯ ನಾಗರಾಜ ಮಳೆದ (16) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತಾಯಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಾ ಮಗನನ್ನು ಬೆಳೆಸಿದ್ದರು.

ಇತ್ತೀಚೆಗಷ್ಟೇ ಪ್ರಥಮ ಪಿಯುಸಿಗೆ ಹೋಗುತ್ತಿದ್ದ ಅಜಯ ತನಗೆ ಸ್ಮಾರ್ಟ್ ಫೋನ್ ಬೇಕೆಂದು ಹಠ ಹಿಡಿದಿದ್ದ. ಮಗನಿಗೆ ತಾಯಿ ಸದ್ಯ ಮನೆ ಕಟ್ಟುತ್ತಿರುವ ಕಾರಣ ಈಗ ಕೊಡಿಸಲು ಆಗುವುದಿಲ್ಲ ಎಂದು ಅಸಹಾಯಕತೆ ಹೇಳಿಕೊಂಡಿದ್ದರೆನ್ನಲಾಗಿದೆ.

ಹೀಗಾಗಿ ಮನನೊಂದ ಯುವಕ ಆತ್ಮಹತ್ಯೆ ಕೃತ್ಯಕ್ಕೆ ಕೈ ಹಾಕಿದ್ದಾನೆ. ಘಟನಾ ಸ್ಥಳಕ್ಕೆ ಹಳಿಯಾಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version