ಮಳೆಯಿಂದಾಗಿ ಗುಡ್ಡ ಕುಸಿತ: ರಸ್ತೆ ಸಂಚಾರದಲ್ಲಿ ತೊಡಕು: ಮಾಹಿತಿ ನೀಡಿದ ಜಿಲ್ಲಾಡಳಿತ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಹಲವೆಡೆ ಸಂಚಾರ ವ್ಯವಸ್ಥೆಗೆ ತೊಡಕಾಗಿದೆ. ಅಲ್ಲದೆ, ಇದೀಗ ಗುಡ್ಡ ಕುಸಿತದಿಂದಾಗಿ ಅಣಶಿ ಘಟ್ಟದಲ್ಲಿ ಪ್ರಮುಖ ಹೆದ್ದಾರಿಯ ಸಂಪರ್ಕವೇ ಕಳೆದುಕೊಂಡು ಪ್ರಯಾಣಿಕರು ಪರದಾಡುವಂತಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಕಾರವಾರದಿಂದ ಜೋಯಿಡಾ, ದಾಂಡೇಲಿ, ಬೆಳಗಾವಿ, ಧಾರವಾಡಕ್ಕೆ ತೆರಳಲು ಇದು ಪ್ರಮುಖ ರಸ್ತೆಯಾಗಿತ್ತು. ಇನ್ನು ರಸ್ತೆ ಸರಿಪಡಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಜೋಯಿಡಾ ತಾಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಕದ್ರಾ, ಕೈಗಾಕ್ಕೆ ಕೆಲಸಕ್ಕಾಗಿ ಜನರು ಬರುತ್ತಿದ್ದರು. ಅಲ್ಲದೇ ಕದ್ರಾ, ಕೈಗಾ ಭಾಗದಿಂದ ಧಾರವಾಡ, ಬೆಳಗಾವಿಗೆ ಸಾಕಷ್ಟು ಜನರು ಓಡಾಡುತ್ತಿದ್ದು ಇದೀಗ ರಸ್ತೆ ಸಂಪರ್ಕ ಇಲ್ಲದೇ ನೂರಾರು ಕಿಲೋ ಮೀಟರ್ ಸುತ್ತಿಕೊಂಡು ಬರುವ ಪರಿಸ್ಥಿತಿ ಎದುರಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version