Important
Trending

ಗೋಕರ್ಣ ಮಹಾಬಲೇಶ್ವರನ ದರ್ಶನ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿ: ಆತ್ಮಲಿಂಗಕ್ಕೆ ವಿಶೇಷ ಪೂಜೆ

ಗೋಕರ್ಣ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ವಿಶೇಷ‌ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ, ರುದ್ರಾಭಿಷೇಕ ಪೂಜೆ ನೆರವೇರಿಸಿ, ಪ್ರಾರ್ಥಿಸಿದರು.

ಮಂದಿರದ ಪ್ರಧಾನ ಅರ್ಚಕರಾದ ವೇ. ಅಮೃತೇಶ ಹಿರೆರವರು ಪೂಜಾ ಕೈಂಕರ್ಯ ನೆರವೇರಿಸಿದರು. ಇದೇ ವೇಳೆ ಅಷ್ಟಬಂಧ ನಡೆದ ವರ್ಷ ಮತ್ತು ಅಂದಿನ ಆತ್ಮಲಿಂಗ ವಿಶ್ವರೂಪ ದರ್ಶನದ ಕುರಿತು ಕಾಗೇರಿಯವರು ಮಾಹಿತಿ ಪಡೆದರು.

ಅಲ್ಲದೆ, ಶ್ರೀ ಕ್ಷೇತ್ರ ಗೋಕರ್ಣದ ಮಹಾಗಣಪತಿ ಹಾಗು ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಶ್ರೀ ರಾಮಚಂದ್ರಪುರ ಮಠ ಶ್ರೀಮಜ್ಜಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾ ಸ್ವಾಮಿಗಳವರ ಗುರುಕುಲ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಗುರುಗಳವರ ಆಶೀರ್ವಾದ ಪಡೆದರು.

ವಿಸ್ಮಯ ನ್ಯೂಸ್ ಗೋಕರ್ಣ

Back to top button