ಜಲಾಶಯದಿಂದ ಹೆಚ್ಚಿನ ನೀರು ಹೊರಕ್ಕೆ: ನದಿ ಪಾತ್ರದಲ್ಲಿ ಪ್ರವಾಹದ ಆತಂಕ

ಜಲಾಶಯದ ಕೆಳಭಾಗದ ಕಾಳಿ ನದಿ ಪಾತ್ರದ ಜನರಲ್ಲಿ ಹೆಚ್ಚಿದ ಆತಂಕ

ಕಾರವಾರ: ತಾಲ್ಲೂಕಿನ ಕದ್ರಾ ಜಲಾಶಯದಿಂದ 40,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯದ 8 ರೇಡಿಯಲ್ ಗೇಟ್‌ಗಳಿಂದ ನೀರು ಹೊರಕ್ಕೆ ನಿಡಲಾಗುತ್ತಿದ್ದು, ಜಲಾಶಯದ ಕೆಳಭಾಗದ ಕಾಳಿ ನದಿ ಪಾತ್ರದ ಜನರಲ್ಲಿ ಹೆಚ್ಚಿದ ಆತಂಕ ಉಂಟಾಗಿದೆ.

ಕದ್ರಾ ಜಲಾಶಯದ ಗರಿಷ್ಠ ಮಟ್ಟ 35.50 ಮೀ ಆಗಿದ್ದು, ಈಗಾಗಲೇ 30.50 ನಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಹಿತದೃಷ್ಟಿಯಿಂದ ನೀರನ್ನು ಗೇಟ್ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version