Follow Us On

WhatsApp Group
Important
Trending

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್: ಚಾಲಕ ಪ್ರಾಣಾಪಾಯದಿಂದ ಪಾರು

ಹೆದ್ದಾರಿಗೆ ಅಡ್ಡಲಾಗಿ ಉರುಳಿ ಸಂಚಾರಕ್ಕೆ ಅಡೆತಡೆ

ಯಲ್ಲಾಪುರ: ಟ್ಯಾಂಕರೊoದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಕಿರವತ್ತಿ ಸಮೀಪದ ಡೋಮಗೇರೆ ಕ್ರಾಸ್ ಬಳಿ ನಡೆದಿದೆ. ಲಾರಿಯು ಮಂಗೂರಿನಿoದ ಮುಂಬೈಗೆ ಹೊರಟಿದ್ದು, ಡೊಮಗೇರೆ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಉರುಳಿದ್ದು, ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಅಪಘಾತದಿoದಾಗಿ ಟ್ಯಾಂಕರಿನ ಮುಂಭಾಗವು ಮೇಲ್ಮುಖವಾಗಿ ಬಿದ್ದಿದೆ. ಈ ಘಟನೆಯಲ್ಲಿ ಚಾಲಕ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಸಹಾಯದಿಂದ ಟ್ಯಾಂಕರ್ ಎತ್ತಿ ಸಂಚಾರ ದಟ್ಟಣೆ ಸುಗಮಗೊಳಿಸಿದರು.

ವಿಸ್ಮಯ ನ್ಯೂಸ್, ಕಾರವಾರ

Back to top button