![](http://i0.wp.com/vismaya24x7.com/wp-content/uploads/2022/07/fire-2.jpg?fit=779%2C633&ssl=1)
ಯಲ್ಲಾಪುರ: ಚಲಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಾರಿ ಹೊತ್ತಿ ಉರಿದ ಘಟನೆ ತಾಲೂಕಿನ ಗುಳ್ಳಾಪುರ ಬಳಿಯ ಮೊಗದ್ದೆ ಸಮೀಪ ನಡೆದಿದೆ. ಟೈಯರಿನ ಘರ್ಷಣೆಯಿಂದಾಗಿ ಕೊಪ್ಪಳದಿಂದ ಅಂಕೋಲಾ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ವೇಳೆ ಚಾಲಕ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ನಿರ್ಜನ ಪ್ರದೇಶದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ
![](http://i0.wp.com/vismaya24x7.com/wp-content/uploads/2021/07/vismaya-1.png?resize=708%2C98&ssl=1)
ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಾರಿಯಲ್ಲಿದ್ದ ಸಿಮೆಂಟ್ ಸಿಮೆಂಟ್ ಕುಡಾ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ, ಈ ವೇಳೆಗೆ ಆಗಲೇ ಲಾರಿ ಸುಟ್ಟು ಭಸ್ಮವಾಗಿದೆ.
ನಿಯಂತ್ರಣ ತಪ್ಪಿ ಬಿದ್ದ ಬೈಕ್: ಕಾಲೇಜಿನ ಉಪನ್ಯಾಸಕ ನಿಧನ
ವಿಸ್ಮಯ ನ್ಯೂಸ್, ಕಾರವಾರ
![](http://i0.wp.com/vismaya24x7.com/wp-content/uploads/2022/03/yukti-advt.jpg?resize=708%2C398&ssl=1)
One Comment