![](http://i0.wp.com/vismaya24x7.com/wp-content/uploads/2022/07/devi-1.jpg?fit=730%2C438&ssl=1)
ಮುಂಡಗೋಡ: ಇಲ್ಲಿನ ಪ್ರಸಿದ್ಧ ಮಾರಿಕಾಂಬಾದೇವಿಗೆ ಹಾಕಿದ್ದ ಚಿನ್ನದಸರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 26ರ ರಂದು ಸನವಳ್ಳಿ ಗ್ರಾಮದ ಮಾರಿಕಾಂಬ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. ಗರ್ಭಗುಡಿಗೆ ಹಾಕಿದ್ದ ಕೀಲಿಯನ್ನು ಮುರಿದು ದೇವಿಗೆ ಹಾಕಿದ್ದ ಚಿನ್ನದ ಸರವನ್ನು ಕಳುವು ಮಾಡಲಾಗಿತ್ತು.
![](http://i0.wp.com/vismaya24x7.com/wp-content/uploads/2021/07/vismaya-1.png?resize=708%2C98&ssl=1)
ಚಲಿಸುತ್ತಿದ್ದ ಲಾರಿಗೆ ಬೆಂಕಿ: ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡ ಚಾಲಕ
ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಆರೋಪಿಯನ್ನು ಸನವಳ್ಳಿ ಗ್ರಾಮದ ಮಹಾಂತೇಶ ಆರೇಗೊಪ್ಪ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ದೇವಿಗೆ ಹಾಕಿದ್ದ 40 ಗ್ರಾಂ ಚಿನ್ನದ ಎರಡು ಪದಕದ ಸರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
![](http://i0.wp.com/vismaya24x7.com/wp-content/uploads/2022/03/yukti-advt.jpg?resize=708%2C398&ssl=1)