Important
Trending

ಶರಾವತಿ ನದಿ ತೀರದ ಜನರಿಗೆ ಪ್ರವಾಹದ ಮೊದಲನೇ ಮುನ್ನೆಚ್ಚರಿಕೆಯ ಸೂಚನಾ ಪತ್ರ:ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ

ಜಲಾಶಯದ ಹಿತ ದೃಷ್ಟಿಯಿಂದ ನೀರು ಬಿಡುವ ಮಾಹಿತಿ

ಹೊನ್ನಾವರ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯನ ಪ್ರದೇಶದಲ್ಲಿ ಸತತವಾಗಿ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನದಿನೇ ಏರುತ್ತಿರುತ್ತದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಮಳೆ ಇಂದಿನ ಬೆಳಗ್ಗೆ 8.00 ಘಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ.

ಯುವತಿ ಸ್ನಾನ ಮಾಡುತ್ತಿರುವಾಗ ಇಣುಕಿ ನೋಡಿ,ವಿಡಿಯೋ ಮಾಡಲೆತ್ನಿಸಿದ ವ್ಯಕ್ತಿ ?. ಕಳ್ಳಬೆಕ್ಕಿನಂತೆ ಓಡಿ ಪರಾರಿಯಾಗಲೆತ್ನಿಸಿದಾಗ ಬಿತ್ತು ಧರ್ಮದೇಟು ?

ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 30,000 ಕ್ಯೂಸೆಕ್ ಗಳಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಅಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಮೊದಲ ಮುನ್ನೆಚ್ಚರಿಕೆಯ ಪತ್ರ ಹೋರಡಿಸಿದೆ.

ಎಚ್ಚರಿಕೆ ಪತ್ರದಲ್ಲಿ ಏನಿದೆ?

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟಲಿ ಆ ನೀರು ಗೇರುಸೋಪ್ಪಾ ಜಲಾಶಯಕ್ಕೆ ಹರಿದು ಬರುತ್ತದೆ. ಲಿಂಗನಮಕ್ಕಿ ಜಲಾಶದಿಂದ ಹರಿಬಿಟ್ಟ ಅಷ್ಟೆ ಪ್ರಮಾಣದ ನೀರನ್ನು ಗೇರುಸೋಪ್ಪಾ ಜಲಾಶಯದ ಹಿತ ದೃಷ್ಟಿಯಿಂದ ಹೊರಬಿಡಲಾಗುವುದು ಎಂದು ತಿಳಿಸಿದ್ದಾರೆ.

ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

Related Articles

Back to top button