Focus News
Trending

ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಆಗ್ರಹಿಸಿ ಮನವಿ

ಭಟ್ಕಳ: ಭಟ್ಕಳದ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂದು ಭಟ್ಕಳ ಎಜುಕೇಶನ್ ಟ್ರಸ್ಟ್ ಹಾಗೂ ಇದರೆಲ್ಲ ಶಿಕ್ಷಣ ಸಂಸ್ಥೆಗಳ, ಸಿಬ್ಬಂದಿಗಳ, ಪಾಲಕರ ಮತ್ತು ಸಮಸ್ತ ಭಟ್ಕಳ ನಾಗರಿಕರ ಪರವಾಗಿ ಭಟ್ಕಳ ಎಜುಕೇಶನ್ ಟ್ರಸ್ಟ್’ನ ಅಧ್ಯಕ್ಷರಾದ ಡಾ. ಸುರೇಶ ನಾಯಕರವರು ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಯಾದ ರಾಜು ಮೊಗವೀರ ಹಾಗೂ ಭಟ್ಕಳದ ಸಹಾಯಕ ಆಯುಕ್ತರಾದ ಮಮತಾ ದೇವಿಯವರಿಗೆ ಸಲ್ಲಿಸುವ ಮೂಲಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಮಾನ್ಯ ಆರೋಗ್ಯ ಸಚಿವರಿಗೆ ಒತ್ತಾಯಿಸಿದರು.

ಭಟ್ಕಳ ಎಜುಕೇಶನ್ ಟ್ರಸ್ಟ್’ನ ಅಧ್ಯಕ್ಷರಾದ ಡಾ. ಸುರೇಶ ನಾಯಕ ಹಾಗೂ ಟ್ರಸ್ಟೀ ಮ್ಯಾನೇಜರ್ ರಾಜೇಶ ನಾಯಕರವರು ಭಟ್ಕಳದಲ್ಲಿರುವ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯತೆಯನ್ನು ಸವಿಸ್ತಾರವಾಗಿ ವಿವರಿಸಿ ಮನವರಿಕೆ ಮಾಡಿಕೊಟ್ಟರಲ್ಲದೇ, ಭಟ್ಕಳದ ತಾಲೂಕು ಆಸ್ಪತ್ರೆಯ ಒಳರೋಗಿಗಳ ಈಗಿರುವ ಹಾಸಿಗೆಯ ಮಿತಿಯನ್ನು 100ರಿಂದ ಕನಿಷ್ಠ 250ಕ್ಕೆ ಹೆಚ್ಚಿಸಬೇಕೆಂದು ಹಾಗೂ ಟ್ರಾಮಾ ಸೆಂಟರನ್ನು ಆರಂಭಿಸುವ ಮೂಲಕ ಈ ಭಾಗದ ಜನರ ಬಹುದಿನದ ಬೇಡಿಕೆಯನ್ನು ಅತೀ ಶೀಘ್ರದಲ್ಲಿ ನೆರವೇರಿಸಿ ಬಡಜನರ ಪಾಲಿಗೆ ನೆರವಾಗಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಎಜುಕೇಶನ್ ಟ್ರಸ್ಟ್’ನ ಅಂಗಸoಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಜರಿದ್ದರು.

ವಿಸ್ಮಯ ನ್ಯೂಸ್, ಭಟ್ಕಳ

Back to top button