Important
Trending

ಮೀನು ಹಿಡಿಯಲು ಹೋದ ವೇಳೆ ಅವಾಂತರ: ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ವರದಾ ನದಿಯಲ್ಲಿ ಮೀನು ಹಿಡಿಯಲು ಹೋದ ವೇಳೆ ದುರಂತ

ಶಿರಸಿ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ವರದಾ ನದಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬನವಾಸಿಯಲ್ಲಿ ನಡೆದಿದೆ. ತಾಲೂಕಿನ ಈಶ್ವರ ಗುತ್ಯ ಚನ್ನಯ್ಯ ಭಾಶಿ ಮೃತ ವ್ಯಕ್ತಿ. ಈತ ತನ್ನ ಮನೆ ಸಮೀಪದ ವರದಾ ನದಿಗೆ ಮೀನು ಹಿಡಿಯಲು ಹೋಗಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿದ್ದಾನೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೋಡ್ ಕ್ರಾಸ್ ಮಾಡುವ ವೇಳೆ ಹಿಂಬದಿಯಿಂದ ಡಿಕ್ಕಿಹೊಡೆದ ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು

ಕೆಲಸದ ವೇಳೆ ಗಲಾಟೆ: ಕೂಲಿ ಕಾರ್ಮಿಕನ ಮೇಲೆ ಮಾಲೀಕ ಹಲ್ಲೆ?

ಕುಮಟಾ: ಮಾಲಿಕ, ಕೂಲಿ ಕೆಲಸದವನ ಮೇಲೆ ಹಲ್ಲೆ ಮಾಡಿದ ಆರೋಪದ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೇಲೆಹಿತ್ತಲ ಮೂಲದ ವ್ಯಕ್ತಿ ನಾಗಪ್ಪ ಗೌಡ ಹಲ್ಲೆಗೊಳಗಾಗಿ ಗಾಯಗೊಂಡ ವ್ಯಕ್ತಿ. ಈತ ಮನೆಯೊಂದರಲ್ಲಿ ಪೇಟಿಂಗ್ ಕೆಲಸ ಮುಗಿಸಿ ಕೂಲಿ ಹಣ ಕೇಳಿದಾಗ ಮಾಲೀಕ ಮತ್ತು ಕಾರ್ಮಿಕನ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಈ ವೇಳೆ ಮನೆಯ ಮಾಲೀಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button