Focus News
Trending

ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ‘ಹಳ್ಳಿ ಕಡೆ ನಡಿಗೆ’ ಕಾರ್ಯಕ್ರಮ: ಸಭೆ ಕುರಿತು ಮಾಹಿತಿ ನೀಡಿದ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ

ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾದ್ಯಂತ 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯಕ್ರಮ

ಶಿರಸಿ: ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾದ್ಯಂತ 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ‘ಹಳ್ಳಿ ಕಡೆ ನಡಿಗೆ’ ಕಾರ್ಯಕ್ರಮ ಶಿರಸಿ ತಾಲೂಕ ದೇವನಳ್ಳಿ ಗ್ರಾಮ ಪಂಚಾಯತದಲ್ಲಿ ಅಗಸ್ಟ 29 ರಂದು ಸೋಮವಾರ ಮುಂಜಾನೆ 9 ಗಂಟೆಗೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದ್ದಾರೆ.

‘ಹಳ್ಳಿ ಕಡೆ ನಡಿಗೆ’ ಕಾರ್ಯಕ್ರಮ ಇಂದು ಮುಂಜಾನೆ 9:30 ಕ್ಕೆ ಶಿರಸಿ ತಾಲೂಕಿನ, ದೇವನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ, ಕರೂರ ಗ್ರಾಮದ ಈಶ್ವರ ದೇವಸ್ಥಾನದ ಏದುರುಗಡೆಯಿಂದ ಪ್ರಾರಂಭಗೊಂಡು ಶಿರಬೈಲ್ ಮಾರ್ಗವಾಗಿ 7 ಕೀ.ಮೀ ದೂರ ಸಂಚರಿಸಿ ದೇವನಳ್ಳಿ ಗ್ರಾಮ ಪಂಚಾಯತದಲ್ಲಿ 10:30 ಕ್ಕೆ ಸಭೆ ಸಂಘಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button