Focus News
Trending
ಸರಸ್ವತಿ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದ ವಿಧಾತ್ರಿ ಅಕಾಡೆಮಿಯಿಂದ ಶಿಕ್ಷಕರ ದಿನಾಚರಣೆಯ ನಿಮಿತ್ತ ವಿಶಿಷ್ಟ ಕಾರ್ಯಕ್ರಮ
![Teacher's Day](http://i0.wp.com/vismaya24x7.com/wp-content/uploads/2022/09/A-unique-program-on-Teachers-Day-by-Vidyatri-Academy.jpg?fit=1280%2C1280&ssl=1)
ಕಮಟಾ: ಕೊಂಕಣ ಎಜುಕೇಷನ್ ಟ್ರಸ್ಟ್ ನ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಶೈಕ್ಷಣಿಕ ಸಹಭಾಗಿತ್ವ ಹೊಂದಿರುವ ವಿಧಾತ್ರಿ ಅಕಾಡೆಮಿಯು ತಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ವಿದ್ಯಾರ್ಥಿಗಳನ್ನು ಕರೆದುಕೊಂಡು ವಿದ್ಯಾರ್ಥಿಗಳು ತಾವು ಕಲಿತಂತಹ ಹೈಸ್ಕೂಲ್ ಗಳಿಗೆ ತೆರಳಿ ಆ ಮಕ್ಕಳಿಂದಲೆ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯವನ್ನು ತಿಳಿಸಿದ್ದಾರೆ.
ಕುಮಟಾ, ಹೊನ್ನಾವರ, ಅಂಕೋಲಾ ತಾಲೂಕಿನ ಹೈಸ್ಕೂಲ್ ಗಳಿಗೆ ಭೇಟಿ ನೀಡಿ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳ ಜೊತೆಗೆ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಶ್ರೀ. ಗುರುರಾಜ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಕಿರಣ ಭಟ್ಟ, ಪಿ.ಆರ್.ಒ. ಶ್ರೀ. ನಿತೇಶ ಮೇಸ್ತಾ ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಕುಮಟಾ
![](http://i0.wp.com/vismaya24x7.com/wp-content/uploads/2022/08/shri-devi-latest.jpg?resize=708%2C398&ssl=1)