Important
Trending

ದೇವರ ದರ್ಶನ ಪಡೆಯಲು ಸಮುದ್ರ ಸ್ನಾನಕ್ಕೆಂದು ಇಳಿದಾಗ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾದ ಪ್ರವಾಸಿಗ

ಗೋಕರ್ಣ: ಪುರಾಣ ಪ್ರಸಿದ್ಧ ಕ್ಷೇತ್ರ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಸ್ನೇಹಿತರೊಂದಿಗೆ ಬಂದಿದ್ದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಶಿವಕುಮಾರ ಹುಚ್ಚಣ್ಣ (23) ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ. ಈತ ತನ್ನ 9 ಸ್ನೇಹಿತರೊಂದಿಗೆ ಗುಲ್ಬರ್ಗಾದಿಂದ ಗೋಕರ್ಣ ಮಹಾಬಲೇಶ್ವರ ದರ್ಶನಕ್ಕೆ ಪ್ರವಾಸಕ್ಕೆ ಬಂದಿದ್ದ.

ರೈಲ್ವೆ ಸುರಂಗ ಮಾರ್ಗದಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ: ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ

ದೇವರ ದರ್ಶನ ಪಡೆಯಲು ಸಮುದ್ರ ಸ್ನಾನಕ್ಕೆಂದು ಇಳಿದಾಗ ಶಿವಕುಮಾರ್ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಕರಾವಳಿ ಕಾವಲು ಪಡೆ, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ವಿಸ್ಮಯ ನ್ಯೂಸ್, ಗೋಕರ್ಣ

Back to top button