Big News
Trending

ಸಿದ್ದಾಪುರದಲ್ಲಿ ಒಬ್ಬಂಟಿ ಮಹಿಳೆಯ ಹತ್ಯೆ?

ಸಿದ್ದಾಪುರ: ಕಲ್ಲಿನಿಂದ ಜಜ್ಜಿದ ರೀತಿಯಲ್ಲಿ ಮಹಿಳೆಯ ಕೊಲೆ ಮಾಡಿದ ಘಟನೆ ತಾಲೂಕಿನ ದೊಡ್ಮನೆ ಸಮೀಪದ ನೆಟ್ಗೋಡ್ ನಲ್ಲಿ ನಡೆದಿದೆ. ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದೇ ಅಥವಾ ಇನ್ನೇನು ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೊಲೆಯಾದ ಮಹಿಳೆ ಗೌರಿ ಈಶ್ವರ ನಾಯ್ಕ ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಕಳೆದ ಮೂರು ವರ್ಷದ ಹಿಂದೆ ಮೃತರಾಗಿದ್ದರು. ಮೃತ ಮಹಿಳೆ ಒಬ್ಬಂಟಿಯಾಗಿ ಮನೆಯಲ್ಲಿ ವಾಸವಾಗಿದ್ದರು. ಮೃತರ ಮಗಳಿಗೆ ಮದುವೆಯಾಗಿದ್ದು, ಮಗ ತೀರ್ಥಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ವಿದ್ಯುತ್ ಬಿಲ್ ಕೊಡಲು ಹೋದ ಕಲೆಕ್ಟರ್ ನೋಡಿ ವಿಷಯ ತಿಳಿಸಿದ್ದಾರೆ. ಶವದ ಮೇಲೆ ಕಲ್ಲಿನಿಂದ ಜಜ್ಜಿರುವ ಗುರುತು ಪತ್ತೆಯಾಗಿದ್ದು, ಬಟ್ಟೆ ಕೂಡ ಅಸ್ತವ್ಯಸ್ತವಾಗಿದ್ದು, ಅತ್ಯಾಚಾರ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ ಎಂಬ ಮಾಹಿತಿ ದೊರಕಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ತನಿಖೆಯ ನಂತರವೇ ಪೂರ್ಣ ಮಾಹಿತಿ ಬರಬೇಕಿದ್ದು ಸ್ಥಳೀಯ ಮಾಹಿತಿ ಆಧರಿಸಿ ಮಾಡಲಾಗಿದೆ.


ವಿಸ್ಮಯ ನ್ಯೂಸ್, ಸಿದ್ದಾಪುರ

[sliders_pack id=”1487″]

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Back to top button