![](http://i0.wp.com/vismaya24x7.com/wp-content/uploads/2020/07/coronavirus-1200-1.jpg?fit=1200%2C630&ssl=1)
ಮೂಲೆಕೇಣಿ, ಮುಲ್ಲಾವಾಡದಲ್ಲಿ ಮುಂದುವರೆದ ಸೋಂಕಿನ ನಂಟು!
ಮೊಗಟಾ, ಕಣಗೀಲ,ಕಂತ್ರಿಗೂ ಅಂಟಿತೇ ನಂಜು?
ಅಂಕೋಲಾ: ತಾಲೂಕಿನಲ್ಲಿ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲಿದ್ದು ಇಂದು 15ಕ್ಕೂ ಹೆಚ್ಚು ಪ್ರಕರಣಗಳು ದೃಢಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಒಟ್ಟೂ ಸೋಂಕಿತರ ಸಂಖ್ಯೆ ಅರ್ಧ ಶತಕದ ಗಡಿ ದಾಟಲಿದೆ.ಈ ಹಿಂದೆ ಸೋಂಕು ಕಾಣಿಸಿಕೊಂಡ ಮೂಲೆಕೇಣಿ ಮತ್ತು ಮುಲ್ಲಾವಾಡಗಳಲ್ಲಿ ತಲಾ 6ರಿಂದ 7ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದ್ದು ಇವೆಲ್ಲವೂ ಈ ಹಿಂದಿನ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಿಂದ ಬಂದಿರಬಹುದೆಂದು ಶಂಕಿಸಲಾಗಿದೆ . ಮೊಗಟಾ, ಕಣಗೀಲ, ಮತ್ತು ಪಟ್ಟಣ ವ್ಯಾಪ್ತಿಯ ಕಂತ್ರಿಯಲ್ಲಿಯೂ ತಲಾ ಒಂದೊಂದು ಪ್ರಕರಣ ಕಾಣಿಸಿಕೊಂಡಿದೆ ಎನ್ನಲಾಗಿದೆ. ನಿಖರ ಅಂಕಿ-ಅಂಶಗಳು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ದೃಢಗೊಳ್ಳ ಬೇಕಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)