Important
Trending

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ಅಂಕೋಲಾ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಸಂಭವಿಸಿದೆ. ಕೊಗ್ರೆ ನಿವಾಸಿ ನಿತ್ಯಾನಂದ ಮಾರುತಿ ಆಗೇರ (35) ಮೃತ ದುರ್ದೈವಿಯಾಗಿದ್ದಾನೆ. ಗೌಂಡಿ ಕೆಲಸ ಮಾಡಿಕೊಂಡಿದ್ದ ಈತ ಸರಾಯಿ ಕುಡಿತದ ಚಟದಿಂದ ಅನಾರೋಗ್ಯಕ್ಕೊಳಗಾಗಿ ಬಳಲುತ್ತಿದ್ದ .

ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ: ಪರಾರಿಯಾದ ಓರ್ವ ಆರೋಪಿ

ಈತ ಕೊಗ್ರೆಯ ತನ್ನ ವಾಸ್ತವ್ಯದ ಮನೆಯ ಕೋಣೆಯ ಪಕಾಶಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ  ಮೃತನ ಸಹೋದರ ಚೇತನ್ ಆಗೇರ ಪೊಲೀಸ್ ದೂರು ನೀಡಿದ್ದು , ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು,ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

land for sale

Back to top button