ಕಟ್ಟಿಗೆ ತರಲು ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಶವಕೊಳೆತ ಸ್ಥಿತಿಯಲ್ಲಿ ಪತ್ತೆ

ಭಟ್ಕಳ: ಕಟ್ಟಿಗೆ ತರಲು ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಇದೀಗ ಶವಕೊಳೆತ ಸ್ಥಿತಿಯಲ್ಲಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗ್ರೆಯಲ್ಲಿ ಪತ್ತೆಯಾಗಿದ್ದಾಳೆ. ಮಹಾದೇವಿ ದೇವಾಡಿಗ (57) ಮೃತ ಮಹಿಳೆಯಾಗಿದ್ದು, ಈಕೆ ಸೆಪ್ಟೆಂಬರ್ 17ರಂದು ಕಟ್ಟಿಗೆ ತರಲು ಬೆಂಗ್ರೆಯ ಅರಣ್ಯಕ್ಕೆ ಹೋಗಿದ್ದಳು.

India Post Recruitment 2022: 98 ಸಾವಿರ ನೇಮಕಾತಿಗೆ ಅರ್ಜಿ ಆಹ್ವಾನ: SSLC & PUC ಆದವರು ಅರ್ಜಿ ಸಲ್ಲಿಸಬಹುದು.

ಸಂಜೆ ಆದರು ಮನೆಗೆ ಬಾರದೆ ಇರುವುದರಿಂದ ಮಹಿಳೆಯ ಮನೆಯವರು ನಾಪತ್ತೆ ಆಗಿರುವ ಬಗ್ಗೆ ಸೆಪ್ಟೆಂಬರ್ 17ರಂದು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪತ್ತೆ ಕಾರ್ಯ ನಡೆಸಿದ ಪೊಲೀಸರಿಗೆ ಇಂದು ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಗೆ ಬಿಪಿ ಹಾಗೂ ಶುಗರ್ ಖಾಯಿಲೆ ಒಳಗಾಗಿದ್ದಳು ಎನ್ನಲಾಗಿದ್ದು, ಇದರಿಂದಾಗಿ ಆಕೆ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

land for sale
Exit mobile version