Important
Trending

ಮೃತಪಟ್ಟ ಹೆಂಡತಿಯ ಅಂತಿಮಕ್ರಿಯೆ ಮುಗಿಸಿ ಮರಳಿ ಮನೆಗೆ ಬರುವಷ್ಟರಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು: ನಗದು, ಚಿನ್ನಾಭರಣ ದೋಚಿ ಪರಾರಿ

ಶಿರಸಿ: ಮೃತಪಟ್ಟ ಹೆಂಡತಿಯ ಅಂತಿಮಕ್ರಿಯೆ ಮುಗಿಸಿ ಮರಳಿ ಮನೆಗೆ ಬರುವಷ್ಟರಲ್ಲಿ ಮನೆಯಲ್ಲಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ನಗದು ಹಾಗೂ ಒಂದು ಬಂಗಾರದ ಸರವನ್ನು ಕಳವು ಮಾಡಿದ ಘಟನೆ ತಾಲೂಕಿನ ಆರೆಕೊಪ್ಪದಲ್ಲಿರುವ ಅಬ್ದುಲ್ ಬಶೀರ ಎಂಬುವವರ ಮನೆಯಲ್ಲಿ ನಡೆದಿದೆ. ಮನೆಯ ಹಂಚನ್ನು ತೆಗೆದು ಒಳಗೆ ಇಳಿದಿರುವ ಕಳ್ಳರು, ಮೂರು ಕಪಾಟ್ ಒಡೆದು ನಗದು ಮತ್ತು ಬಂಗಾರದ ಸರವನ್ನು ಕದ್ದೊಯ್ದಿದ್ದಾರೆ. ಹೆಂಡತಿಗೆ ಅನಾರೋಗ್ಯ ಕಾಡಿದ್ದರಿಂದ ಅಬ್ದುಲ್ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ತೆರಳಿದ್ದರು. ಆದರೆ ಹೆಂಡತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

ಆಹಾರ ಅರಸುತ್ತಾ ಬಂದು ಮನೆಯ ಬಾವಿಗೆ ಬಿದ್ದ ಚಿರತೆ: ರಕ್ಷಣಾ ಕಾರ್ಯಾಚರಣೆ

ಹೀಗಾಗಿ ಮತ್ತೊಂದು ಮನೆಯಲ್ಲಿ ವಿಧಿವಿಧಾನ ಮುಗಿಸಿ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಮನೆಗೆ ಮರಳಿದ್ದರು. ತಮ್ಮ ಮಗನೊಂದಿಗೆ ಆರೆಕೊಪ್ಪದ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಕಂಡುಬoದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಶ್ವಾನದಳವನ್ನು ಕರೆಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

hitendra naik

Back to top button