ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿ ಅಗ್ನಿ ದುರಂತ: ಹೊತ್ತಿ ಉರಿದ ಕಟ್ಟಡ: ಅಪಾರಹಾನಿ

ದಾಂಡೇಲಿ:  ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಲೆಬಾಳುವ ಪೀಠೋಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಅಂಬೇವಾಡಿಯಲ್ಲಿ ನಡೆದಿದೆ. ತೀವ್ರವಾಗಿ ಬೆಂಕಿ ವ್ಯಾಪಿಸಿದ್ದರಿಂದ ಮಳಿಗೆಯಲ್ಲಿದ್ದ ಬಹುತೇಕ ಪೀಠೋಪಕರಣಗಳು ಸುಟ್ಟು ಹೋಗಿವೆ.

ಗೋಕರ್ಣದ ಪ್ರಸಿದ್ದ ಬೀಚ್ ನಲ್ಲಿ ಸಮುದ್ರದ ಸುಳಿಗೆ ಸಿಲುಕಿ ಮುಳುಗುತ್ತಿದ್ದ ಚಿತ್ರನಟ: ಜೀವ ಉಳಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ಬೆಳಗಿನ ಜಾವ ಪೀಠೋಪಕರಣ ಮಳಿಗೆಯಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಬೆಂಕಿಯ ತೀವ್ರತೆ ಜೋರಿದ್ದ ಹಿನ್ನಲೆಯಲ್ಲಿ ಅಕ್ಕಪಕ್ಕದ ಅಂಗಡಿಗೂ ಬೆಂಕಿ ಆವರಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ‌ ಸಿಬ್ಬಂದಿ ಬೆಂಕಿಯನ್ನು ಹರಸಾಹಸ ಪಟ್ಟು ನಂದಿಸಿದ್ದಾರೆ. ಅಗ್ನಿದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

hitendra naik
Exit mobile version