![](http://i0.wp.com/vismaya24x7.com/wp-content/uploads/2022/11/sucide.jpg?fit=1280%2C720&ssl=1)
ದಾಂಡೇಲಿ: ಯುವಕನೋರ್ವ ಬ್ಲೇಡ್ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಕಳೆದ ತಿಂಗಳು ನಡೆದ ಗಲಾಟೆ ಪ್ರಕರಣದಲ್ಲಿ ಈತನ ಮೇಲೆ ಪ್ರಕರಣವೊಂದು ದಾಖಲಾಗಿದ್ದು, ಹೀಗಾಗಿ ಈತ ಮನನೊಂದಿದ್ದ ಎನ್ನಲಾಗಿದೆ. ಈ ವಿಷಯನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
India Post Recruitment 2022: 18 ರಿಂದ 81 ಸಾವಿರ ಆರಂಭಿಕ ವೇತನ: SSLC & PUC ಆದವರು ಅರ್ಜಿ ಸಲ್ಲಿಸಬಹುದು
ನಗರದ ಸಮೀಪದ ಕೋಗಿಲಬನ ಗ್ರಾಮದ ನಿವಾಸಿ ಗುರು ಲೋಕರೆ ಎಂಬಾತನೇ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಯುವಕನಾಗಿದ್ದಾನೆ. ಸಾರ್ವಜನಿಕರು ಕಂಡು ಕೂಡಲೇ ಈತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಅಪಾಯದಿಂದ ಪಾರಾಗಿದ್ದಾನೆ.
ವಿಸ್ಮಯ ನ್ಯೂಸ್, ದಾಂಡೇಲಿ
![](http://i0.wp.com/vismaya24x7.com/wp-content/uploads/2022/08/Raj-Granites-new.jpg?resize=708%2C398&ssl=1)