Focus NewsImportant
Trending

ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಯುವಕ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ

ಅಂಕೋಲಾ: ಯುವಕನೋರ್ವ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವಾಸರೆ ಗ್ರಾಮದಲ್ಲಿ ಸಂಭವಿಸಿದೆ. ವಾಸರ -ಕುದ್ರಿಗೆ ನಿವಾಸಿ ಸಂದೇಶ ಹರಿಶ್ಚಂದ್ರ ನಾಯಕ(32) ಎಂಬಾತನೇ ತನ್ನ ಮನೆಯಲ್ಲಿ  ನೇಣಿಗೆ ಶರಣಾದ ಯುವಕನಾಗಿದ್ದು, ಈತ ಅದಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಪಿ ಎಸ್ ಐ ಮಹಾಂತೇಶ ವಾಲ್ಮೀಕಿ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ. 

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button