ಶಾಲಾ ಬಸ್ ಪಲ್ಟಿ: ಓರ್ವ ಮಹಿಳೆ ಸಾವು: 12 ಮಂದಿಗೆ ಗಾಯ

ಶಿರಸಿ ಮಾರಿಕಾಂಬಾ ದೇವಿಯ ದರ್ಶನಕ್ಕೆ ತೆರಳುತ್ತಿದ್ದಾಗ ಘಟನೆ

ಶಿರಸಿ: ಶಿರಸಿ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟು, 12 ಜನ ಗಾಯಗೊಂಡ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಅಪಘಾತದಲ್ಲಿ ಶಾಲಾ ಸಿಬ್ಬಂದಿ ಕಸ್ತೂರಮ್ಮ(50) ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕುಮಟಾ-ಹಾವೇರಿ ಮಾರ್ಗ ಮದ್ಯದ ಬುಗಡಿಕೊಪ್ಪ ಗ್ರಾಮದ ಭೂತೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ.

ಅಣ್ಣನ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಶರಣಾದ ಮೂವರು ಆರೋಪಿಗಳು

ಅಪಘಾತವಾದ ಬಸ್ ರಾಣಿಬೆನ್ನೂರಿನ ಸಿದ್ದರೂಡ ನಗರದ ಪರಿಣಿತಿ ವಿದ್ಯಾಮಂದಿರದ ಶಾಲಾ ಬಸ್ ಎಂದು ತಿಳಿದುಬಂದಿದೆ. ಶಾಲಾ ಸಿಬ್ಬಂದಿಗಳು ಶಿರಸಿ ಮಾರಿಕಾಂಬಾ ದೇವಿಯ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್‌ಐ ಹನುಮಂತ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

hitendra naik
Exit mobile version