ಎರಡು ಗುಂಪಿನ ನಡುವೆ ಗಲಾಟೆ: ಮೂವರಿಗೆ ಗಂಭೀರ ಗಾಯ

ಸಿದ್ದಾಪುರ: ಎರಡು ಗುಂಪಿನ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡು ಮೂವರಿಗೆ ಗಾಯಗಳಾದ ಘಟನೆ ತಾಲೂಕಿನ ಅರೇಂದೂರಲ್ಲಿ ನಡೆದಿದೆ. ಅರೇಂದೂರ್ ಗ್ರಾಮದ ಮಸೀದಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕುರಿತು ಇತ್ತೀಚಿಗೆ ಗಲಾಟೆ ಮಾಡಿಕೊಂಡು ಗ್ರಾಮದಲ್ಲಿ ಎರಡು ಗುಂಪುಗಳಾಗಿ ವೈಷಮ್ಯ ಬೆಳೆದಿತ್ತು. ಇದೀಗ ಗಲಾಟೆ ಪ್ರಾರಂಭವಾಗಿ ಹೊಡೆದಾಡಿಕೊಂಡಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

hitendra naik

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Exit mobile version