ಅಜಾಗರೂಕತೆಯ ಚಾಲನೆ: ಮರಕ್ಕೆ ಡಿಕ್ಕಿಹೊಡೆದು ಬೈಕ್ ಸವಾರ ಸಾವು

ಮುಂಡಗೋಡ : ಅತೀವೇಗ, ಅಜಾಗರೂಕತೆಯ ಚಾಲನೆಯಿಂದಾಗಿ ಬೈಕ್ ಸವಾರ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದೆ. ಸಂಜು ನರಸಪ್ಪ (33)ಎಂಬಾತ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಈತ ತನ್ನ ಕೆಟಿಎಂ ಬೈಕ್ ಮೇಲೆ ಯಲ್ಲಾಪುರದಿಂದ ಮುಂಡಗೋಡ ಕಡೆ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರಗಾಯಗೊAಡು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version