Focus NewsImportant
Trending

ಬಸ್ ಹತ್ತುವ ವೇಳೆ ಪ್ರಯಾಣಿಕನ ಕಿಸೆ ಕತ್ತರಿಸಿ ಹಣ ಕಳ್ಳತನ: ಕೊನೆಗೂ ಸಿಕ್ಕಿಬಿದ್ದ ಕಿಸೆಗಳ್ಳ

ಶಿರಸಿ: ಪ್ರಯಾಣಿಕನೊಬ್ಬನ ಕಿಸೆ ಕತ್ತರಿಸಿ 75 ಸಾವಿರ ರೂಪಾಯಿ ಹಣ ಕದ್ದ ಘಟನೆ ಇಲ್ಲಿನ ಹಳೆ ಬಸ್ ನಿಲ್ದಾಣದ ಸಮೀಪ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತನಿoದ 60 ಸಾವಿರ ಹಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ಮೂಲದ ಮಹೇಶ್ ಸಾತಪ್ಪ ಕಾಳೆ ಎಂದು ಗುರುತಿಸಲಾಗಿದೆ.

ತಂದೆಯ ಅಂತ್ಯ ಸಂಸ್ಕಾರ ನಡೆದ ಕೆಲ ಹೊತ್ತಿನಲ್ಲೇ ಮಸಣದ ಹಾದಿ ತುಳಿದ ಮಗ: ವಿಧಿಯ ಕ್ರೂರ ಆಟಕ್ಕೆ ನಲುಗಿದ ಬಡಕುಟುಂಬ

ನವೆಂಬರ್ 11 ರಂದು ನಗರದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತಿದ್ದ ಸುರೇಶ್ ಮಂಜಪ್ಪ ಎಂಬುವವರಿoದ ಹಣ ಕಳ್ಳತನವಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯವನ್ನು ಕಲೆಹಾಕಿದ ಪೊಲೀಸರು ಆರೋಪಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಎನ್ನಲಾಗಿದೆ. ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ರಾಚಂದರ ನಾಯಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button