Important
Trending

ಬೈಕಿಗೆ ಡಿಕ್ಕಿ ಹೊಡೆದ ಮೀನುಲಾರಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಭಟ್ಕಳ: ಮೀನು ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಮುಟ್ಟಳ್ಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರರನ್ನು ಲೋಕೇಶ ನಾಯ್ಕ, ಶೇಖರ ನಾಯ್ಕ ಎಂದು ಗುರುತಿಸಲಾಗಿದೆ.

ಹೊನ್ನಾವರ ಮೂಲದ ಮೀನು ಲಾರಿ ಚಾಲಕ ರವಿ ಸುಂದರ ಭೋವಿ ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷಿತನದಿಂದ ಚಲಾಯಿಸಿಕೊಂಡು ಬಂದು ಭಟ್ಕಳ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.ಅಪಘಾತದ ರಸಭಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಕುರಿತು ಮೀನು ಲಾರಿ ಚಾಲಕ ರವಿ ಸುಂದರ ಭೋವಿ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Related Articles

Back to top button