ಸಂಸ್ಕೃತ ಭಾಷಣ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಕುಮಟಾ: ಕೆನರಾ ಎಜ್ಯುಕೇಷನ್ ಸೊಸೈಟಿಯ ಗಿಬ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ನೇಹಾ ಬಾಲಚಂದ್ರ ಭಟ್ ಇವಳು ಅಂಕೋಲಾದಲ್ಲಿ ನಡೆದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ . ಇವಳ ಈ ಸಾದನೆಗೆ ಶಾಲಾ ಆಡಳಿತ ಮಂಡಳಿ ಕರ‍್ಯಾಧ್ಯಕ್ಷರಾದ ವಸುದೇವ ಪ್ರಭು ಮತ್ತುಎಲ್ಲಾ ಪದಾಧಿಕಾರಿಗಳು, ಮುಖ್ಯಾಧ್ಯಾಪಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಪಾಲಕರು ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

ವಿಸ್ಮಯ ನ್ಯೂಸ್ ಕುಮಟಾ

Exit mobile version