Focus NewsImportant
Trending

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ಬೈಕ್: ಚಿಕಿತ್ಸೆ ಫಲಿಸದೆ ಮೃತಪಟ್ಟ ಪಾದಚಾರಿ

ಸಿದ್ದಾಪುರ: ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಮೃತಪಟ್ಟ ಘಟನೆ ತಾಲೂಕಿನಲ್ಲಿ ನಡೆದಿದೆ. ಹೌದು, ತಾಲೂಕಿನ ಗೋಳಿಮಕ್ಕಿ ಹೆಗ್ಗರಣಿ ರಸ್ತೆಯ ಶೆಟ್ಟರಕೇರಿ ಹತ್ತಿರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಗುಂಟಗಾರಿನ ಪರಮೇಶ್ವರ ಗಣಪತಿ ಹೆಗಡೆ(84) ಚಿಕಿತ್ಸೆ ಫಲಕಾರಿಯಾಗದೆ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಸ್ತೆಯ ಬದಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button