Focus NewsImportant
Trending

ಬೈಕ್, ಸೈಕಲ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಕುಮಟಾ: ಬೈಕ್ ಹಾಗೂ ಸೈಕಲ್ ನಡುವೆ ಅಪಘಾತವಾಗಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮೂರೂರು ರಸ್ತೆಯಲ್ಲಿ ನಡೆದಿದೆ. ಮೂರೂರಿನ ಘಟ್ಟದ ಮೇಲಿನ ತಿರುವಿನಲ್ಲಿ ಸೈಕಲ್ ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಈ ವೇಳೆ ಬೈಕ್ ಸವಾರ ಮಹೇಶ ಸುರೇಶ ಗೌಡನ ತಲೆಗೆ ಬಲವಾದ ಗಾಯವಾಗಿತ್ತು. ಕೂಡಲೇ ಕುಮಟಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ, ಸೈಕಲ್ ಸವಾರನಿಗೆ ಕಾಲಿನ ಮೂಳೆ ಮುರಿದು ಕಾರವಾರ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button