ಬೈಕ್, ಬುಲೆರೋ ನಡುವೆ ಅಪಘಾತ: ಕೆಲಸಕ್ಕೆ ತೆರಳುತ್ತಿದ್ದ ಬೈಕ್ ಸವಾರ ದುರ್ಮರಣ

ಹೊನ್ನಾವರ: ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ತಾರ ಸಮೀಪದ ಮುಂಡಾರದಲ್ಲಿ ಬೈಕ್ ಮತ್ತು ಬುಲೆರೋ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ.

ಮೃತಪಟ್ಟ ಯುವಕನನ್ನು ಹಡಿಕಲ್ ಸುಬ್ರಹ್ಮಣ್ಯ ಗೌಡ ಆಗಿದ್ದು ಪ್ರತಿದಿನದಂತೆ ಬೆಳಿಗ್ಗೆ ಬೈಕ್ ಮೇಲೆ ಕೆಲಸಕ್ಕೆ ಹೋಗುತ್ತಿದ್ದಾಗ ಹೋಗುತ್ತಿದ್ದಾಗ ಬುಲೆರೋ ನಡುವೆ ಅಪಘಾತ ಸಂಭವಿಸಿದೆ.ತಲೆಯ ಭಾಗಕ್ಕೆ ಗಂಭೀರ ಗಾಯ ಸಂಭವಿಸಿ ತಿವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೆ ಮೃತಪಟ್ಟಿದ್ದು, ಈ ಸಂಭದ ಮಂಕಿ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

Exit mobile version