ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ: ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ

ಕುಮಟಾ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಮತ್ತು ರಾಜ್ಯಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಶ್ರೀ ಗುರು ವಿದ್ಯಾಪೀಠ ವಸತಿ ಶಾಲೆ ಖಣದಾಳ, ಕಲಬುರಗಿ ನಡೆದ 30ನೇ ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶ-2022ರ ಉಪವಿಷಯದಲ್ಲಿ ಕಾಲಿನಿಂದ ಒತ್ತುವ ನಲ್ಲಿ ಎನ್ನುವ ಯೋಜನೆಯನ್ನು ಉತ್ತಮವಾಗಿ ಮಂಡಿಸಿ ಗ್ರಾಮೀಣ ಹಿರಿಯರ ವಿಭಾಗದಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿ ಸಾನಿಕಾ ಜಟ್ಟಿ ನಾಯ್ಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಕಾರ್ಯಕ್ರಮ ಅಹಮದಾಬಾದ್‌ನ ಗುಜರಾತನಲ್ಲಿ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶಕ ಶಿಕ್ಷಕರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ಮತ್ತು ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕರಾದ ಶ್ರೀ ರೋಹಿದಾಸ ಎಸ್ ಗಾಂವಕರ, ಶಿಕ್ಷಕ ವೃಂದದವರು, ರಿನ ನಾಗರಿಕರು ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

Exit mobile version