Follow Us On

WhatsApp Group
Important
Trending

ಹೊಸ ಜಾತಿಯ ಸಿಹಿ ನೀರಿನ ಏಡಿ ಪತ್ತೆ!

ಯಲ್ಲಾಪುರ: ಹೊಸ ಜಾತಿಯ ಸಿಹಿ ನೀರಿನ ಏಡಿಯೊಂದು ತಾಲೂಕಿನಲ್ಲಿ ಪತ್ತೆಯಾಗಿದೆ. ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆ, ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ ಮತ್ತು ಪುಣೆಯ ಪ್ರಾಣಿ ಸರ್ವೇಕ್ಷಣಾಲಯದ ಸಮೀರಕುಮಾರ ಪಾಟಿ ತಂಡ ಈ ವೇಲಾ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿಯನ್ನು ಪತ್ತೆ ಹಚ್ಚಿದೆ. ಇದಕ್ಕೆ ವೇಲಾ ಬಾಂಧವ್ಯ ಎಂದು ಹೆಸರಿಡಲಾಗಿದೆ.

ಅಕ್ರಮವಾಗಿ 2.60 ಕೋಟಿ ವೆಚ್ಚದ ವಜ್ರವನ್ನು ದುಬೈಗೆ ಸಾಗಿಸುತ್ತಿದ್ದ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಟ್ಕಳ ಮೂಲದ ಇಬ್ಬರು ವಶಕ್ಕೆ

ಸಾಮಾನ್ಯವಾಗಿ ಹಳದಿ ಮತ್ತು ಕೇಸರಿ ಮಿಶ್ರಿತ ಮೈಬಣ್ಣದ ಈ ಏಡಿಯು ಮಳೆಗಾಲದಲ್ಲಿ ತೋಟ, ಗದ್ದೆಗಳಲ್ಲಿ ಕಾಣಸಿಗುತ್ತವೆ. ನಾಲ್ಕು ಇಂಚು ಅಗಲ, ಮೂರೂವರೆ ಇಂಚು ಉದ್ದವಿರುವ ಈ ಏಡಿಯ ತಲೆಯಿಂದ ಬೆನ್ನಿನ ಮೇಲೆ ಕಪ್ಪು ಬಣ್ಣದ ಪತಂಗದoಥ ಆಕಾರವಿದೆ. ಸಮತಟ್ಟಾದ ಜಾಗದ ಮಣ್ಣಿನಲ್ಲಿ ಸುಮಾರು ಒಂದರಿoದ ಒಂದೂವರೆ ಅಡಿಯಷ್ಟು ಆಳದಲ್ಲಿ ರಂಧ್ರ ಕೊರೆದು ಇದು ವಾಸ ಮಾಡುತ್ತದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button