Follow Us On

WhatsApp Group
Focus News
Trending

ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ಮುರ್ಡೇಶ್ವರ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಎನ್.ಎಸ್.ಎಸ್ ಕೋಶ ಧಾರವಾಡ, ಜಿಲ್ಲಾ ಪಂಚಾಯತ ಕಾರವಾರ,ತಾಲೂಕ ಪಂಚಾಯತ ಭಟ್ಕಳ, ಗ್ರಾಮ ಪಂಚಾಯತ ಶಿರಾಲಿ ಹಾಗೂ ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು 7 ದಿನಗಳ ಕಾಲ ಅಳ್ವೇಕೋಡಿ ದೇವಸ್ಥಾನ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಆರ.ಎನ್,ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ದಿನೇಶ ಗಾಂವಕರ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದು ರಾಷ್ಟಿಯ ಸೇವೆ ಮಾಡಬೇಕೆಂದರು,

ಮುಖ್ಯ ಅತಿಥಿಗಳಾಗಿ ಆಗಮಿಸಿದ .ಎಂ.ಬಿ ರಾಮರಥ ಮಾತನಾಡಿ ವಿದ್ಯಾರ್ಥಿಗಳನ್ನು ಹಾರೈಸಿದರು. ಪ್ರಾಚಾರ್ಯರಾದ ಡಾ.ಸಂಜಯ್ ಕೆ.ಎಸ್ ಮಾತನಾಡಿ ಈ ಕಾರ್ಯಕ್ರಮದ ಉದ್ದೇಶವಾದ “ನನಗಾಗಿ ಅಲ್ಲ ನಿನಗಾಗಿ” ಈ ತತ್ವದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಗಣೇಶ ನಾಯ್ಕ, ಸಹ ಯೋಜನಾಧಿಕಾರಿಗಳಾದ ಗಣಪತಿ ಕಾಯ್ಕಿಣಿ ಉಪನ್ಯಾಸ ವೃಂದವರು ಹಾಜರಿದ್ದರು.

ವಿಸ್ಮಯ ನ್ಯೂಸ್, ಕಾರವಾರ

Back to top button