Follow Us On

WhatsApp Group
Focus NewsImportant
Trending

ರಾಜ್ಯಮಟ್ಟದ ಕಾರ್ಯಕ್ರಮದ ಮೈದಾನದಲ್ಲಿ ಜೇನು ದಾಳಿ: 50ಕ್ಕೂ ಹೆಚ್ಚು ಜನರಿಗೆ ಗಾಯ

ಮುಂಡಗೋಡ: ಮೈದಾನದಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಸೇರಿದ್ದರು. ಈ ವೇಳೆ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ದಾಳಿಗೊಳಗಾದ ಸುಮಾರು 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹೌದು, ಇಲ್ಲಿನ ಟಿಬೇಟ್ ಕ್ಯಾಂಪ್ ನಂ.1ರ ಬೃಹತ್ ಮೈದಾನದಲ್ಲಿ ರಾಜ್ಯಮಟ್ಟದ ಕೆಡಿಎಸ್‌ಎಸ್ ಪದಾಧಿಕಾರಿಗಳ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಿಬಿರದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಶಿಬಿರಾರ್ಥಿಗಳ ಮೇಲೆ ಜೇನು ನೋಣಗಳು ದಾಳಿ ಮಾಡಿದೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button