Follow Us On

WhatsApp Group
Focus NewsImportant
Trending

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿಬಿದ್ದ ಕಾರು

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಧಾರೇಶ್ವರದಿಂದ ಚಂದಾವರ ಮಾರ್ಗವಾಗಿ ಸಾಗರಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಚಾಲಕ ಗಾಯಗೊಂಡಿದ್ದಾನೆ. ಅಪಾಯಕಾರಿ ತಿರುವಿನಲ್ಲಿ ವೇಗವಾಗಿ ಚಲಿಸಿದ್ದರಿಂದ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಹೌದು, ಚಂದಾವರ ಸಮೀಪವಿರುವ ಟೇಬ್ರಿ ಹಳ್ಳದ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಈ ಸೇತುವೆಗೆ ತಡೆಗೋಡೆ ಇಲ್ಲದಿರುವುದು ಇಂತಹ ಹಲವು ಅಫಘಾತಗಳಿಗೆ ಕಾರಣವಾಗುತ್ತಿದ್ದು, ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button