Big News
Trending

ಅಂಕೋಲಾ ವಿಮಾನ ನಿಲ್ದಾಣ ಯೋಜನೆ : ವಿರೋಧಿ ಸಮಿತಿ ರಚನೆ?

ಕಾನೂನು ಹೋರಾಟಕ್ಕೆ ಮುಂದಾದರೇ ಅಲಗೇರಿ ಗ್ರಾಮಸ್ಥರು?
ಜನಧ್ವನಿಗೆ ಸ್ಪೂರ್ತಿಯ ಬೆಂಬಲ ನೀಡಿದ ಶಿವರಾಮ ಯಾರು?

[sliders_pack id=”1487″]

ಅಂಕೋಲಾ : ಪ್ರಸ್ತಾವಿತ ಅಲಗೇರಿ ವಿಮಾನ ನಿಲ್ದಾಣ ಯೋಜನೆ ಅನುಷ್ಠನಕ್ಕೆ ಸರ್ಕಾರದ ಮಟ್ಟದಲ್ಲಿ ನಾನಾ ರೀತಿಯ ಸಿದ್ಧತೆಗಳು ಚುರುಕುಗೊಳ್ಳುತ್ತಿವೆ. ಈ ನಡುವೆ ತಮ್ಮ ಭೂಮಿ ಸ್ವಾಧೀನ ಪಡಿಸಿಕೊಳ್ಳದೇ, ಯೋಜನೆ ರೂಪಿಸಿ ಎಂದು ಹತ್ತಾರು ಬಾರಿ ಪ್ರತಿಭಟನೆ-ಮನವಿ ಸಲ್ಲಿಸಿದ್ದರೂ, ಗಮನ ಹರಿಸದ ಸರ್ಕಾರದ ನಿಲುವನ್ನು ಖಂಡಿಸಿ, ಸ್ಥಳೀಯರು “ವಿರೋಧಿ ಸಮಿತಿ” ರಚಿಸಿಕೊಂಡು ಕಾನೂನು ಹೋರಾಟಕ್ಕೆ ಮುಂದಾಗುವ ಸೂಚನೆ ನೀಡಿದ್ದಾರೆ.

ಅಲಗೇರಿ ಗ್ರಾಮದ ಈಶ್ವರ ದೇವಾಲಯದಲ್ಲಿ ರವಿವಾರ ಸಾಯಂಕಾಲ ಸಭೆ ನಡೆಸಿ, ವಿಮಾನ ನಿಲ್ದಾಣದ ಯೋಜನೆಗಳ ಸಾಧಕ-ಭಾದಕಗಳ ಕುರಿತು ದೀರ್ಘಚರ್ಚೆ ನಡೆಸಿದ ಗ್ರಾಮಸ್ಥರು, ಯಾವುದೇ ಕಾರಣಕ್ಕೂ ಭೂಮಿ ಬಿಟ್ಟುಕೊಡಬಾರದು ಎಂಬ ತೀರ್ಮಾನಕ್ಕೆ ಬಂದಂತಿದೆ.
ಜಿಲ್ಲೆಯ ಜನಪರ ಹೋರಾಟಗಾರರೆಂದೇ ಗುರುತಿಸಿಕೊಂಡಿರುವ ಶಿವರಾಂ ಗಾಂವಕರ ಖುದ್ದು ಸ್ಥಳಕ್ಕೆ ಆಗಮಿಸಿ, ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಿ, ಈ ಹಿಂದಿನ ಜಿಲ್ಲೆಯ ವಿವಿಧ ಯೋಜನೆಗಳಿಂದಾದ ಸಂಕಟದ ಸರಮಾಲೆ ವಿವರಿಸಿ, ತಮ್ಮ ಹರಿತವಾದ ಮಾತುಗಳಿಂದ ಅಲಗೇರಿ ಗ್ರಾಮಸ್ಥರನ್ನುದ್ದೇಶಿಸಿ ಸ್ಪೂರ್ತಿಯ ಮಾತನ್ನಾಡಿದರು.
ಈ ಸಂದರ್ಭದಲ್ಲಿ ಅಲಗೇರಿ-ಬಡಗೇರಿ ಮತ್ತಿತ್ತರ ಗ್ರಾಮದ ಮುಖಂಡರು, ಸ್ಥಳೀಯ ನಾಗರಿಕರು ಪಾಲ್ಗೊಂಡು ಮುಂದಿನ ಹೋರಾಟದ ರೂಪ-ರೇಷೇಗಳ ಕುರಿತು ಚರ್ಚಿಸಿದರು.

ವಿಮಾನ ನಿಲ್ದಾಣ ಮತ್ತಿತ್ತರ ಯಾವುದೇ ಯೋಜನೆಗಳನ್ನು ವಿರೋಧಿಸುವುದು ಸರಿಯಲ್ಲಾ, ಆದರೆ ನಮ್ಮ ಕೃಷಿಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ತೀವ್ರ ವಿರೋಧವಿದೆ. ಆಡಳಿತ ಪಕ್ಷದ ಶಾಸಕರು, ಮಂತ್ರಿಗಳು, ಸಂಸದರೇ ಮೊದಲಾದ ಎಲ್ಲಾ ನಾಯಕರು ಅಂಕೋಲಾ-ಹುಬ್ಬಳ್ಳಿ ರೈಲ್ವೆ ಯೋಜನೆ ಜಾರಿ ಮಾಡಿ ತಮ್ಮ ತಾಕತ್ತು ತೋರಿಸಿ – ಶಿವರಾಂ ಗಾಂವಕರ, ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button