Focus NewsImportant
Trending

ಭೀಕರ ಅಪಘಾತ: ಎರಡು ಲಾರಿಗಳ ನಡುವೆ ಡಿಕ್ಕಿ: ಓರ್ವ ಸಾವು

ಕಾರವಾರ: ಅದಿರು ಸಾಗಾಟ ಲಾರಿಯೊಂದು ಮದ್ಯ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿAದ ಡಿಕ್ಕಿ ಹೊಡೆದ ಪರಿಣಾಮ ಅದಿರು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದ ಬಳಿ ನಡೆದಿದೆ. ರೂಪೇಶ ಪಾಟೀಲ್(23) ಮೃತಪಟ್ಟ ದುರ್ದೈವಿ. ಈತ ಬೆಳಗಾವಿ ಜಿಲ್ಲೆಯ ಖಾನಾಪುರ ನಿವಾಸಿ ಎಂದು ತಿಳಿದುಬಂದಿದೆ. ಗೋವಾದಿಂದ ಅಂಕೋಲಾದತ್ತ ತೆರಳುತ್ತಿದ್ದ ಲಾರಿ, ಮದ್ಯ ಸಾಗಾಟ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Related Articles

Back to top button