ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಪ್ರಯತ್ನ: ಕಾರವಾರದಲ್ಲಿ ಸರ್ಕಾರಿ ನೌಕರರಿಂದ ಬೈಕ್ ರ್ಯಾಲಿ

ಕಾರವಾರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಕಾರವಾರದಲ್ಲಿ ಸರ್ಕಾರಿ ನೌಕರರು ಬೈಕ್ ರ್ಯಾಲಿ ನಡೆಸಿದರು. ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ಈ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಖಂಡೂ, ಪೆÇ್ರಬೆಶನರಿ ಐಎಎಸ್ ಅಧಿಕಾರಿ ಜುಬಿನ್ ಮಹಾಪಾತ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದಾದ್ಯಂತ ಬೈಕ್ ಓಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು,

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಹೊರಟ ರ್ಯಾಲಿ ಸುಭಾμï ಸರ್ಕಲ್, ಸವಿತಾ ಸರ್ಕಲ್, ಕಾಜುಬಾಗ್ ರೋಡ್ ಮುಖಾಂತರ ಕಾಳಿ ನದಿ ಗಾರ್ಡನ್ ಮೂಲಕ ಹಾದು ಖಾಪ್ರಿ ದೇವಸ್ಥಾನ ಮೂಲಕ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಹತ್ತಿರ ಮುಕ್ತಾಯಗೊಂಡಿತು.

ವಿಸ್ಮಯ ನ್ಯೂಸ್, ಕಾರವಾರ

Exit mobile version