ಸಿಮೆಂಟ್ ಚೀಲದಲ್ಲಿ ಮದ್ಯ ಸಾಗಾಟ: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

ಸಿದ್ದಾಪುರ- ಶಿರಸಿ ರಾಜ್ಯ ಹೆದ್ದಾರಿಯ ಕೋಲ್ ಸಿರ್ಸಿ ಕ್ರಾಸ್ ಬಳಿ ಕಾರಿನಲ್ಲಿ ಅನಧಿಕೃತವಾಗಿ ಮದ್ಯ ಸಾಗಾಟ ಮಾಡುತ್ತಿರುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮದ್ಯ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸಿಮೆಂಟ್ ಚೀಲ ಮತ್ತು ಒಂದು ಕೈ ಚೀಲದಲ್ಲಿ, ಮದ್ಯವನ್ನು ಮಾರಾಟಕ್ಕಾಗಿ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿ, ಸದರಿ ಸ್ವತ್ತುಗಳನ್ನು ಜಪ್ತುಪಡಿಸಿ, ಆರೋಪಿಯಾದ ವಿನಾಯಕ ಮಂಜುನಾಥ ನಾಯ್ಕ ಹೀರೆಕೈ ತ್ಯಾಗಲಿ ಸಿದ್ದಾಪುರ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ .

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Exit mobile version