Focus NewsImportant
Trending

ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಲಾರಿ: ಮೂವರಿಗೆ ಗಂಭೀರ ಗಾಯ

ಅಂಕೋಲಾ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ತಾಲೂಕಿನ ಗುಂಡಬಾಳಾ ಕಾಶಿಗದ್ದೆ ಬಳಿ ಸಂಭವಿಸಿದೆ. ಬೈಕ್ ಸವಾರ ಕುಮಟಾ ಹಳೆ ಹೆರವಟ್ಟ ನಿವಾಸಿ ದಯಾನಂದ ಸುಬ್ರಾಯ ದೇಶಭಂಡಾರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಆವರ ಜೊತೆಗೆ ಪ್ರಯಾಣಿಸುತ್ತಿದ್ದ ಸಂಧ್ಯಾ ಭಂಡಾರಿ, ನೇಹಾ ಭಂಡಾರಿ ಅವರಿಗೆ ಸಹ ತೀವ್ರ ಸ್ವರೂಪದ ಗಾಯಗಳಾಗಿವೆ.

ಅಂಕೋಲಾದ ಹಿಲ್ಲೂರು ಮಾರ್ಗವಾಗಿ ಮಾದನಗೇರಿ ಕಡೆ ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಕುಮಟಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕ ಮಹಾರಾಷ್ಟ್ರದ ಸಾಂಗ್ಲಿ ತಾಸಗಾಂವ ನಿವಾಸಿ ಪ್ರದೀಪ ನಲವಾಡೆ ಎನ್ನುವವರ ವಿರುದ್ಧ ದೂರು ದಾಖಲಾಗಿದ್ದು ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button