Follow Us On

WhatsApp Group
Focus NewsImportant
Trending

ಎಚ್ಚರಿಕೆಗೆ ಡೋಂಟ್ ಕೇರ್: ಸಮುದ್ರಪಾಲಾದ ಯುವಕ

ಭಟ್ಕಳ: ಮುರುಡೇಶ್ವರ ಸಮುದ್ರ ತೀರದಲ್ಲಿ ಇಂದು ಕೂಡ ಓರ್ವ ಪ್ರವಾಸಿಗ ಲೈಫ್  ಗಾರ್ಡ್ಗಳ ಸೂಚನೆ  ಧಿಕ್ಕರಿಸಿ ಸಮುದ್ರಕ್ಕಿಳಿದು ಸಮುದ್ರ ಪಾಲಾಗಿರುವ ಘಟನೆ ನಡೆದಿದೆ.ಕಣ್ಮರೆಯಾದ ಯುವಕನ್ನು ಪವನ್ ನಾಯ್ಕ(20) ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ನಿವಾಸಿ ಎಂದು ತಿಳಿದು ಬಂದಿದೆ.

ಈತ ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. 6 ಜನ ಸ್ನೇಹಿತರೊಂದಿಗೆ ಇಂದು ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದಾರೆ. ದೇವರ ದರ್ಶನ ಮುಗಿಸಿ ಸಮುದ್ರಕ್ಕೆ ಈಜಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸಮುದ್ರ ತೀರದಲ್ಲಿರುವ ಲೈಫ್ ಗಾರ್ಡ್ ಗಳ ಮಾತು ಧಿಕ್ಕರಿಸಿ ಸಮುದ್ರಕ್ಕೆ ಇಳಿದು ಸಮುದ್ರದಲ್ಲಿ ಪ್ರವಾಸಿಗ ನಾಪತ್ತೆಯಾಗಿದ್ದಾನೆ.

ನಿನ್ನೆ ಕೂಡ ಓರ್ವ ಯುವಕ ನಾಪತ್ತೆಯಾಗಿದ್ದು ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದರು.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Back to top button