ಕೈಕೊಟ್ಟ ಪ್ರೀತಿಸಿದ ಯುವತಿ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ಪ್ರೀತಿಸಿದ ಯುವತಿ ಬೇರೊಬ್ಬನನ್ನು ಮದುವೆಯಾಗಿದ್ದಕ್ಕೆ ಮನನೊಂದ ಯುವಕನೊಬ್ಬ, ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಘಟನೆ ಇಲ್ಲಿನ ರವೀಂದ್ರನಾಥ ಕಡಲತೀರದಲ್ಲಿ ನಡೆದಿದೆ. ಕೂಡಲೇ ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿ ಭಗ್ನಪ್ರೇಮಿಯನ್ನು ರಕ್ಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಮುಫ್ಲಾ ಮಂಡಲ್ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದುಬಂದಿದೆ. ಈತ ಬಂಗಾಳದಲ್ಲಿ ಇದ್ದಾಗ ಯುವತಿಯನ್ನು ಪ್ರೀತಿಸಿದ್ದ. ಆದರೆ, ಕೆಲದಿನಗಳ ಬಳಿಕ ಕಾರವಾರದ ವೈದ್ಯಕೀಯ ಕಾಲೇಜಿನ ಎರಡನೆ ಹಂತದ ಕಟ್ಟಡ ಕಾಮಗಾರಿ ಕೆಲಸಕ್ಕೆ ಆಗಮಿಸಿದ್ದ . ಈ ವೇಳೆ ತನ್ನ ಪ್ರೇಯಸಿ ಬೇರೊಬ್ಬನ ಜೊತೆ ಮದುವೆಯಾಗಿರುವುದು ತಿಳಿದಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version