Follow Us On

WhatsApp Group
Focus NewsImportant
Trending

ವಿಚಾರಣೆಗೆ ಕರೆತಂದ ವ್ಯಕ್ತಿ ಪೊಲೀಸ್ ಠಾಣೆಯಲ್ಲೇ ವಿಷಕುಡಿದು ಸಾವು

ಹೊನ್ನಾವರ: ವಿಚಾರಣೆಗೆ ಕರೆತಂದ ವ್ಯಕ್ತಿ ವಿಷ ಕುಡಿದು ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ತುಳಸಿನಗರದ ಮನೆಯೊಂದರಲ್ಲಿ ಬಂಗಾರ ತೊಳದುಕೊಡುತ್ತೇನೆಂದು ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ವಿಚಾರಣೆಗೆ ಶನಿವಾರದಂದು ಹೊನ್ನಾವರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದು ಮೃತಪಟ್ಟಿದ್ದಾನೆ ಎಂದು ಸಿಪಿಐ ಮಂಜುನಾಥ ತಿಳಿಸಿದ್ದಾರೆ‌.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಿಹಾರ ಮೂಲದ ದಿಲೀಪ ಎಂದು ಗುರುತಿಸಲಾಗಿದೆ. ಪ್ರಕರಣ ಗಂಭೀರತೆ ಪಡೆದಿರುವ ಹಿನ್ನೆಲೆಯಲ್ಲಿ ಎಸ್.ಪಿ. ವಿಷ್ಣುವರ್ಧನ ಹಾಗೂ ಪೊಲೀಸ್ ಅಧಿಕಾರಿಗಳು ಠಾಣೆಗೆ ಬಂದು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್ ,‌ಶ್ರೀಧರ್ ನಾಯ್ಕ ಹೊನ್ನಾವರ

Back to top button