Follow Us On

WhatsApp Group
Important
Trending

ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಯುವಕ

ಯಲ್ಲಾಪುರ: ಇತ್ತಿಚಿನ ದಿನಗಳಲ್ಲಿ ಯುವಕರು ಸಣ್ಣ ಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗುತ್ತಿರುವ ಘಟನೆ ಹೆಚ್ಚುತ್ತಿದೆ. ಹೌದು, ತನಗೆ ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ಮನನೊಂದು, ಯುವಕನೊಬ್ಬ ಸಾವಿಗೆ ಶರಣಾದ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ತೇಲಂಗಾರದಲ್ಲಿ ನಡೆದಿದೆ. ನಾಗರಾಜ ಗಣಪತಿ ಗಾಂವ್ಕರ (35) ಎಂಬಾತನೆ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

KFCSC Recruitment: 386 ಹುದ್ದೆಗಳು: 83 ಸಾವಿರದ ವರೆಗೆ ಸಂಬಳ: ಪಿಯುಸಿ, ಪದವಿ ಆದವರು ಅರ್ಜಿ ಸಲ್ಲಿಸಿ

ನಾಗರಾಜ್ ಕೃಷಿ ಕೆಲಸ ಮಾಡಿಕೊಂಡಿದ್ದ. ಈತನ ಮದುವೆ ಮಾಡಲು ಮನೆಯವರು ಹೆಣ್ಣು ಹುಡುಕುತ್ತಿದ್ದರು. ಆದರೆ ಎಲ್ಲಿಯೂ ಹೆಣ್ಣು ಸಿಗಲಿಲ್ಲ ಎನ್ನಲಾಗಿದೆ. ಹೀಗಾಗಿ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಸಮೀಪದಲ್ಲಿರುವ ಅರಣ್ಯದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button