![](http://i0.wp.com/vismaya24x7.com/wp-content/uploads/2023/06/cheeta-av.jpg?fit=1280%2C720&ssl=1)
ಶಿರಸಿ : ಇತ್ತೀಚೆಗೆ ಎಲ್ಲೆಡೆ ಚಿರತೆ ಹಾವಳಿ ಹೆಚ್ಚುತ್ತಿದೆ. ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ನಾಯಿಯನ್ನು ಕಚ್ಚಿಕೊಂಡು ಹೋಗಿತ್ತು. ಇದಾದ ನಂತರವ ಇದೀಗ ಮತ್ತೆ ಅದೇ ಜಾಗಕ್ಕೆ ಚಿರತೆ ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಮೊದಲು ಮನೆ ಬಾಗಿಲಿನಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಬಂದು ಎತ್ತಿಕೊಂಡು ಹೋಗಿತ್ತು. ಹೀಗಾಗಿ ಕೆಲವೇ ದಿನಗಳ ಬಳಿಕ ಮತ್ತೆ ಆಹಾರ ಅರಸಿ ಬಂದಿದೆ. ಆದರೆ ನಾಯಿ ಸಿಗದ ಕಾರಣ ಮನೆ ಬಾಗಿಲಿನಲ್ಲಿ ಅತ್ತಿತ್ತ ಹುಡುಕಾಟ ನಡೆಸಿ, ವಾಪಾಸ್ ತೆರಳಿದ್ದು, ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಇದರಿಂದಾಗಿ ಗ್ರಾಮದಲ್ಲಿ ಆತಂಕ ಹೆಚ್ಚಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ