Important
Trending

ಮತ್ತೆ ಮನೆಯ ಬಾಗಿಲವರೆಗೆ ಬಂದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

ಶಿರಸಿ : ಇತ್ತೀಚೆಗೆ ಎಲ್ಲೆಡೆ ಚಿರತೆ ಹಾವಳಿ ಹೆಚ್ಚುತ್ತಿದೆ. ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ನಾಯಿಯನ್ನು ಕಚ್ಚಿಕೊಂಡು ಹೋಗಿತ್ತು. ಇದಾದ ನಂತರವ ಇದೀಗ ಮತ್ತೆ ಅದೇ ಜಾಗಕ್ಕೆ ಚಿರತೆ ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಮೊದಲು ಮನೆ ಬಾಗಿಲಿನಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಬಂದು ಎತ್ತಿಕೊಂಡು ಹೋಗಿತ್ತು. ಹೀಗಾಗಿ ಕೆಲವೇ ದಿನಗಳ ಬಳಿಕ ಮತ್ತೆ ಆಹಾರ ಅರಸಿ ಬಂದಿದೆ. ಆದರೆ ನಾಯಿ ಸಿಗದ ಕಾರಣ ಮನೆ ಬಾಗಿಲಿನಲ್ಲಿ ಅತ್ತಿತ್ತ ಹುಡುಕಾಟ ನಡೆಸಿ, ವಾಪಾಸ್ ತೆರಳಿದ್ದು, ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಇದರಿಂದಾಗಿ ಗ್ರಾಮದಲ್ಲಿ ಆತಂಕ ಹೆಚ್ಚಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button