ಮೃತನ ಕಣ್ಣು ದಾನ: ಸಾವಿನ ದು:ಖದಲ್ಲೂ ಮಾನವೀಯತೆ ಮೆರೆದ ಕುಟುಂಬ

ಸಿದ್ದಾಪುರ: ಅಪಘಾತಕ್ಕೀಡಾದ ವ್ಯಕ್ತಿಯೋರ್ವ ಬಹು ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದು , ಚಿಕಿತ್ಸೆ ಫಲಿತದೆ ಬೆಳಗಿನ ಜಾವ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಕುಟುಂಬದವರು ಮಾನವೀಯತೆ ಮೆರೆದಿದ್ದಾರೆ. ಪರಮೇಶ್ವರ್ ನಾಯ್ಕ್ ದೊಡ್ಡಗದ್ದೆ ( ಚಂದ್ರಘಟಗಿ ) ಮೃತ ವ್ಯಕ್ತಿ.

ಜನವರಿಯಲ್ಲಿ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಬೈಕ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಾದ ಪರಮೇಶ್ವರನಿಗೆ ತೀವ್ರ ಗಾಯವಾಗಿತ್ತು. ಆತನನ್ನ ಮಂಗಳೂರಿಗೆ ಚಿಕಿತ್ಸೆಗೆ ದಾಖಲಿಸಿ ಸ್ವಲ್ಪ ಚೇತರಿಸಿಕೊಂಡ ಬಳಿಕ ಸಿದ್ದಾಪುರ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಇದೀಗ ಮೃತಪಟ್ಟಿದ್ದು , ಮೃತನ ಕಣ್ಣುಗಳನ್ನು ಕುಟುಂಬದವರು ದಾನ ಮಾಡುವ ಮೂಲಕ ಸಾವಿನ ದುಃಖದಲ್ಲೂ ಮಾನವೀಯತೆ ಮೆರೆದಿದ್ದಾರೆ. ಶಿರಸಿಯ ಗಣೇಶ ನೇತ್ರಾಲಯ ಆಸ್ಪತ್ರೆಗೆ ಕಣ್ಣುಗಳನ್ನು ನೀಡಿ ಮಾದರಿಯಾಗಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version