ಕೆಸರು ಗದ್ದೆಯಂತಾದ ರಸ್ತೆ – ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಲು ರೋಗಿಗಳ ಪರದಾಟ – ಸಾರ್ವಜನಿಕರ ಆಕ್ರೋಶ

ಸಿದ್ದಾಪುರ: ತಾಲೂಕಿನ ಕ್ಯಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗುವ ರಸ್ತೆ ಕೆಸರುಗದ್ದೆಯಂತಾಗಿದ್ದು, ರಸ್ತೆಯಲ್ಲಿ ರೋಗಿಗಳು ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗುತ್ತಿಗೆದಾರರ ನಿರ್ಲಕ್ಷದ ಬಗ್ಗೆ ಸಾರ್ವಜನಿಕರು ಆರೋಪ ಮಾಡಿದ್ದಾರೆ. ರಸ್ತೆ ದುರಸ್ಥಿ ಕಾರ್ಯ ಅರ್ಧಂಬರ್ದ ವಾಗಿದ್ದು ಈ ರೀತಿ ಆಗಲು ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

ಮಳೆಗಾಲ ಆರಂಭವಾಗುತ್ತದೆ ಎಂದು ತಿಳಿದಿದ್ದರು ಸಹ ಗುತ್ತಿಗೆದಾರ ಜವಾಬ್ದಾರಿ ವಹಿಸದೆ ಈ ರೀತಿಯ ಅಪೂರ್ಣ ಕಾಮಗಾರಿ ಮಾಡಿದ್ದಾರೆ. ಅಲ್ಲದೆ ರೋಗಿಗಳಿಗೆ ಓಡಾಡಲು ಪರ್ಯಾಯ ವ್ಯವಸ್ಥೆ ಮಾರ್ಗ ಕಲ್ಪಿಸಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ರೋಗಿಗಳಿಗೆ ಆಸ್ಪತ್ರೆಗೆ ಓಡಾಡಲು ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಗಳು ಕೇಳಿ ಬಂದಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version