Important
Trending

ಪದೇ ಪದೇ ಮೊಬೈಲ್‌ನಲ್ಲಿ ಮಾತನಾಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

ಗೋಕರ್ಣ: ಮೊಬೈಲ್‌ನಲ್ಲಿ ಮಾತನಾಡದಂತೆ ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾದ ಗೋಕರ್ಣದಲ್ಲಿ ಹನೇಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ವಿಕಾಸ ಚಂದ್ರು ಆಗೇರ ಎಂದು ಗುರುತಿಸಲಾಗಿದೆ. ಮನೆಯ ದೇವರ ಕೋಣೆಯ ಜಂತಿಗೆ ನೈಲಾನ್ ಬಟ್ಟೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತಾಗಿ ಸ್ಥಳೀಯ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

Back to top button